ಕೊಪ್ಪಳ 18: ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ನೂತನ ಛಿಜಿಲ್ಲಾಧಿಕಾರಿಗಳಿಗೆ ಅಧಿಕಾರಿ ಹಸ್ತಾಂತರಿಸಿದರು. ನೂತನ ಜಿಲ್ಲಾಧಿಕಾರಿಗಳು ಈ ಹಿಂದೆ ದಾವಣಗೆರೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರಿ ಸ್ವೀಕರಿಸಿದರು. ಈ ಹಿಂದೆ ಕೊಪ್ಪಳ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.
ಸುರೇಶ್ ಬಿ ಈ ಇಟ್ನಾಳ್ ಅವರು ಒಬ್ಬ ಉತ್ತಮ ದಕ್ಷ ಆಡಳಿತದ ಅನುಭವ ಹೊಂದಿದ ಅಧಿಕಾರಿ ಯಾಗಿದ್ದು ಈ ಹಿಂದೆ ಅಪರ ಜಿಲ್ಲಾಧಿಕಾರಿ ಯಾಗಿ ಜಿಲ್ಲೆಯಲ್ಲಿ ಒಳ್ಳೆಯ ಕೆಲಸ ಮಾಡಿ ಜಿಲ್ಲೆಯ ಸಾಮಾನ್ಯ ಜನರ ಮತ್ತು ವಿವಿಧ ಸಂಘಟನೆಗಳ ಮೆಚ್ಚುಗೆಗೆ ಪಾತ್ರರಾಗಿದ್ದರು ಅವರೇ ಈಗ ಕೊಪ್ಪಳ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಗಳಾಗಿ ಸರ್ಕಾರದಿಂದ ನೇಮಕಗೊಂಡು ಇಂದು ಜಿಲ್ಲೆಗೆ ಭೇಟಿ ನೀಡಿ ಅಧಿಕಾರ ಸ್ವೀಕರಿಸಿ ಕೊಂಡಿರೋದು ಸಂತಸ ಉಂಟು ಮಾಡಿದೆ.