ತಮ್ಮ ಹುಟ್ಟುಹಬ್ಬವನ್ನು ಸಸಿ ನೆಡುವ ಮೂಲಕ ಆಚರಿಸಬೇಕು: ಸೋಮನಾಳ

One should celebrate one's birthday by planting a sapling: Somanala

ವಿಜಯಪುರ 06: ಎಲ್ಲಾ ವಿದ್ಯಾರ್ಥಿನಿಯರು ತಮ್ಮ ಹುಟ್ಟುಹಬ್ಬವನ್ನು ಸಸಿ ನೆಡುವ ಮೂಲಕ ಆಚರಿಸಬೇಕು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.  

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಜೈವಿಕ ಮಾಹಿತಿ ಅಧ್ಯಯನ ಹಾಗೂ ಜೈವಿಕ ತಂತ್ರಜ್ಞಾನ ಅಧ್ಯಯನ ವಿಭಾಗ ಹಾಗೂ ಭಾರತೀಯ ವಿಜ್ಞಾನ ಕಾಂಗ್ರೇಸ್ ಅಸೋಸಿಯೇಷನ್ ವಿಜಯಪುರ ಚಾಪ್ಟರ್ ಇವರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ‘ವಿಶ್ವ ಪರಿಸರ ದಿನಾಚಾರಣೆ’ಯನ್ನು ಸಸಿ ನೇಡುವ ಮೂಲಕ ಉದ್ಘಾಟಿಸಿದರು. 

ಪರಿಸರ ಸಂರಕ್ಷಣೆಯ ಮಹತ್ವವನ್ನು ವಿವರಿಸುತ್ತಾ, ವಿದ್ಯಾರ್ಥಿನಿಯರಲ್ಲಿ ಪರಿಸರದ ಮೇಲಿನ ಜವಾಬ್ದಾರಿಯ ನಂಬಿಕೆಯನ್ನು ಬಿತ್ತಿದರು. ವಿದ್ಯಾರ್ಥಿಗಳು ವಿವಿಧ ಆಯಾಮಗಳಲ್ಲಿ ಉದಾಹರಣೆಗೆ ನೀರು ಸಂರಕ್ಷಣೆ, ಕಸದ ವಿಂಗಡನೆ, ಹಸಿರು ಪರಿಸರ ನಿರ್ಮಾಣ ಮುಂತಾದ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಬೇಕು ಎಂದು ಸಲಹೆ ನೀಡಿದರು. 

ಕಾರ್ಯಕ್ರಮದ ಸಂಯೋಜಕ ಡಾ. ಬಾಬು.ಆರ್‌.ಎಲ್‌. ಪ್ರಾಸ್ತಾವಿಕ ನುಡಿಗಳನ್ನಾಡಿ ಎಲ್ಲರನ್ನು ಸ್ವಾಗತಿಸಿದರು. ಎಲ್ಲ ವಿದ್ಯಾರ್ಥಿನಿಯರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು ಹಾಗೂ ಪರಿಸರವನ್ನು ಸಂರಕ್ಷಿಸಲು ಪ್ರಮಾಣ ಮಾಡಿದರು.