ಕೊಪ್ಪಳ 16: ನಗರಸಭೆಯ ಮೂರನೇ ವಾರ್ಡಿನ ಹಮಾಲರ ಕಾಲೋನಿಗೆ ಹೋಗುವ ಮುಖ್ಯ ರಸ್ತೆಗಳ ನಿರ್ಮಾಣ ಕಾಮಗಾರಿ ಬರದಿಂದ ಸಾಗಿದ್ದು ಸದರಿ ಕಾಮಗಾರಿ ಸ್ಥಳಕ್ಕೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರು ಸ್ಥಳಕ್ಕೆ ಭೇಟಿ ಮಾಡಿ ಕಾಮಗಾರಿಯನ್ನು ವೀಕ್ಷಣೆ ಮಾಡಿ ಸಂಬಂಧಿಸಿದ ಗುತ್ತಿಗೆದಾರರಿಗೆ ಗುಣಮಟ್ಟದ ಕಾಮಗಾರಿ ಮಾಡಲು ಸೂಚಿಸಿದರು ಮತ್ತು ಕೂಡಲೇ ನಿಗದಿತ ಅವಧಿ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಕೊಪ್ಪಳ ನಗರಸಭೆಯ ಸ್ಥಾಯಿ ಸಮೀತಿ ಅಧ್ಯಕ್ಷರಾದ ಬಸಯ್ಯ ಸ್ವಾಮಿ ಹಿರೇಮಠ, ನಗರಸಭೆಯ ಸದಸ್ಯರಾದ ಅಜೀಮುದ್ದಿನ ಅತ್ತಾರ್ ಸೇರಿದಂತೆ ಗುತ್ತಿಗೆದಾರರು ,ಸಿಬ್ಬಂದಿ ವರ್ಗದವರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.