ಹಾವೇರಿ: ಕರ್ನಾಟಕದ ನಾಡು-ನುಡಿ, ಸಂಸ್ಕೃತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ನವಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಸಮಾರಂಭವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಕನರ್ಾಟಕ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ನಾಡು-ನುಡಿ ಮತ್ತು ಅಭಿವೃದ್ಧಿಯ ಕುರಿತಂತೆ ಸ್ಥಬ್ದಚಿತ್ರಗಳ ಪ್ರದರ್ಶನ, ಸಾಂಸ್ಕೃತಿಕ ಮೆರವಣಿಗೆ, ನಾಡು-ನುಡಿಯ ಬಿಂಬಿಸುವ ನೃತ್ಯ ಪ್ರದರ್ಶನ, ಸಾಧಕರಿಗೆ ಸನ್ಮಾನ ಸೇರಿದಂತೆ ವೈವಿಧ್ಯಮ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.
ನ. 1 ರಂದು ಬೆಳಿಗ್ಗೆ 7-45 ಗಂಟೆಗೆ ಹುತಾತ್ಮ ಮೈಲಾರ ಮಹದೇವ ವೃತ್ತದಿಂದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದವರೆಗೆ ಜಾನಪದ ತಂಡದೊಂದಿಗೆ ಹಾಗೂ ವಿವಿಧ ಶಾಲಾ ಮಕ್ಕಳ ಭಾಗವಹಿಸುವಿಕೆಯೊಂದಿಗೆ ಕನ್ನಡ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಸಲು ತೀಮರ್ಾನಿಸಲಾಯಿತು.
ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರಂಭಕ್ಕೆ ಅಗತ್ಯವಾದ ಆಸನ ವ್ಯವಸ್ಥೆ, ಧ್ವನಿವರ್ಧಕ ವ್ಯವಸ್ಥೆ, ಧ್ವಜಾರೋಹಣ ವ್ಯವಸ್ಥೆ, ಪಥಸಂಚಲನ ಹಾಗೂ, ವಿದ್ಯಾಥರ್ಿಗಳಿಂದ ನಾಡು-ನುಡಿ ಬಿಂಬಿಸುವ ಸಾಮೂಹಿಕ ನೃತ್ಯ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲು ಸೂಚಿಸಲಾಯಿತು.
ಕನ್ನಡ ನಾಡು, ನುಡಿ ಹಾಗೂ ನಾಡಿನ ಅಭಿವೃದ್ಧಿಗೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ತೀಮರ್ಾನಿಸಲಾಯಿತು.
ಕೃಷಿ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳಕಲ್ಯಾಣ, ವಾಯುವ್ಯ ಕನರ್ಾಟಕ ಸಾರಿಗೆ, ತೋಟಗಾರಿಕೆ, ಕೈಮಗ್ಗ ಮತ್ತು ಜವಳಿ, ಮೀನುಗಾತರಿಕೆ ಸೇರಿದಂತೆ ವಿವಿಧ ಇಲಾಖೆಗಳು ಪ್ರಗತಿ ಬಿಂಬಿಸುವ ಸ್ಥಬ್ದಚಿತ್ರಗಳನ್ನು ಕ್ರೀಡಾಂಗಣದಲ್ಲಿ ಪ್ರದಶರ್ಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದರು.
ರಾಜ್ಯೋತ್ಸವ ಅಂಗವಾಗಿ ನವಂಬರ್ 1ರ ಸಂಜೆ ನಗರದ ಗುರುಭವನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ತೀಮರ್ಾನಿಸಲಾಯಿತು.
ಸನ್ಮಾನ, ಧ್ವಜಾರೋಹಣ ಕಾರ್ಯಕ್ರಮದ ಸಿದ್ಧತೆ, ಮೆರವಣಿಗೆ, ವೇದಿಕೆ ಅಲಂಕಾರ ಸ್ಥಬ್ದಚಿತ್ರಗಳ ನಿರ್ವಹಣೆ ಸೇರಿದಂತೆ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಎಲ್ಲವನ್ನು ಮುಂಜಾಗ್ರತವಾಗಿ ಸಿದ್ಧತೆಕೈಗೊಳ್ಳಲು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳನ್ನು ಒಳಗೊಂಡ 12 ಸಮಿತಿಗಳನ್ನು ರಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅವರು ಕಾರ್ಯಕ್ರಮದ ಆಯೋಜನೆ ಕುರಿತಂತೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದರ್ೆಶಕ ಪೀರಜಾದೆ, ವಾತರ್ಾಧಿಕಾರಿ ಬಿ.ಆರ್.ರಂಗನಾಥ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಕೃಷಿ ಇಲಾಖೆ ಜಂಟಿ ನಿದರ್ೆಶಕ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕರಾದ ಶಶಿಕಲಾ ಹುಡೇದ, ನಗರಸಭೆ ಪೌರಾಯುಕ್ತ ಬಸವರಾಜ ಜಿದ್ದಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.