ಹಾವೇರಿ16: ಮಾನವ ಹಕ್ಕುಗಳ ಉಲ್ಲಂಘನೆ ಕುರಿತಂತೆ ಸಾರ್ವಜನಿಕ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಆಯೋಗ ಜಾರಿಗೊಳಿಸುವ ನೋಟೀಸಿಗೆ ತ್ವರಿತವಾಗಿ ಉತ್ತರಿಸುವಂತೆ ವಿವಿಧ ಇಲಾಖಾ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯರಾದ ಕೆ.ಬಿ.ಚಂಗಪ್ಪ ಅವರು ಸಲಹೆ ನೀಡಿದರು.
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ವಿವಿಧ ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳ ಕುರಿತಂತೆ ಪರಿಶೀಲನೆ ನಡೆಸಿದ ತರುವಾಯು ಸಭೆ ಉದ್ದೇಶಿಸಿ ಮಾತನಾಡಿದ ಅವರು ದೂರುಗಳಿಗೆ ಕಾಲಾವಧಿಯಲ್ಲಿ ಉತ್ತರಿಸಿ. ಬಹುಪಾಲು ಇಲಾಖೆಗಳಲ್ಲಿ ಕೆಳಹಂತದ ಅಧಿಕಾರಿಗಳು, ವಿಷಯ ನಿರ್ವಾಹಕರು ದೂರುಗಳ ಕುರಿತಂತೆ ತಮ್ಮ ಗಮನಕ್ಕೆ ತಂದಿರುವುದಿಲ್ಲ. ಈ ಕುರಿತಂತೆ ಸ್ಪಷ್ಟ ನಿರ್ದೇಶನ ನೀಡಿ. ಸಾರ್ವಜನಿಕ ದೂರು ಹಾಗೂ ಆಯೋಗದ ಪ್ರಕರಣಗಳಿಗೆ ತ್ವರಿತವಾಗಿ ಉತ್ತರ ನೀಡಬೇಕು. ಅನುಪಾಲನಾ ವರದಿಯನ್ನು ಕಳುಹಿಸುವಂತೆ ಸೂಚಿಸಿದರು.
ವಿಚಾರಣೆ: ಮಾನವ ಹಕ್ಕುಗಳ ಕುರಿತಂತೆ ಕಂದಾಯ, ಗಣಿ ಇಲಾಖೆ,ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ನಗರಸಭೆ, ತಾಲೂಕು ಪಂಚಾಯತ್, ನಗರಸಭೆ, ಕೆ.ಎಸ್.ಆರ್.ಟಿ.ಸಿ. ಪೊಲೀಸ್ ಇಲಾಖೆಯಲ್ಲಿ ನೌಕರರಿಗೆ ವೇತನ ಪಾವತಿಯಲ್ಲಿ ವಿಳಂಬ, ಮನೆ ಮಂಜೂರಾತಿ, ಪೋಕ್ಸೋ ಪ್ರಕರಣ, ಕೌಟುಂಬಿಕ ಪ್ರಕರಣ, ಕ್ರೀಡಾಪಟುಗಳಿಗೆ ಗೌರವಧನ, ಬಿಸಿಯೂಟ ಪ್ರಕರಣಗಳು ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳ ಕುರಿತಂತೆ ವಿಚಾರಣೆ ನಡೆಸಿದರು. ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಡಿ.ವೈ.ಎಸ್.ಪಿ. ಸಂತೋಷ, ಕಾರಾಗೃಹ ಅಧೀಕ್ಷಕ ಟಿ.ಬಿ.ಭಜಂತ್ರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಪೌರಾಯುಕ್ತ ಬಸವರಾಜ ಜಿದ್ದಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿದರ್ೆಶಕ ವಿನೋದ ಹೆಗ್ಗಳಗಿ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಹಾವೇರಿ ತಹಶೀಲ್ದಾರ ಶಂಕರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ.ರಾಜು ಕೂಲೇರ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಬಸವರಾಜ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.