ಮರಳು ಸಮಸ್ಯೆ ಬಗೆಹರಿಸಲು ವಿವಿಧ ಸಂಘಟನೆಗಳಿಂದ ಮನವಿ

ಕಾರವಾರ 09: ಶರಾವತಿ, ಅಘನಾಶಿನಿ, ಗಂಗಾವಳಿ ನದಿಗಳಿಂದ ಮರಳು ಗಣಿಗಾರಿಕೆಗೆ ಅನುಮತಿ ನೀಡಿ, ಕಾಳಿ ನದಿಯಿಂದ ಮಾತ್ರ ಮರಳು ಗಣಿಗಾರಿಕೆಗೆ ನಿರ್ಬಂಧ ಹೇರಿರುವುದನ್ನು ಕಾರವಾರ ಎಂಜಿನಿಯರ್ಸ ಅಸೋಸಿಯೇಶನ್, ಆಕರ್ಿಟೆಕ್ಟ್ ಆಸೋಸಿಯೇಶನ್,ಸೆಂಟರಿಂಗ್ ಗುತ್ತಿಗೆದಾರರ ಸಂಘಟನೆಗಳು ಖಂಡಿಸಿವೆ.

ಪರಿಸರದ ಕಾರಣ ನೀಡಿ ಕೇಂದ್ರ ಸಕರ್ಾರದ ಸಮಿತಿ ಕಾಳಿ ನದಿಯಲ್ಲಿ ಮರಳು ಗಣಿಗಾರಿಕೆಗೆ ನಿರ್ಬಂಧ ಹೇರಿದೆ ಎಂದು ಪರಿಸರ ಅಧಿಕಾರಿ ಹಾಗೂ ಜಿಲ್ಲಾಡಳಿತ ಹೇಳುತ್ತಿದೆ. ಕಾರವಾರದ ಕಾಳಿ ನದಿಯಲ್ಲಿ ಮರಳು ಗಣಿಗಾರಿಕೆಗೆ ಎಲ್ಲಾ ನಿಯಮಗಳನ್ನು ಹೇರಿ ಅನುಮತಿ ನೀಡಬೇಕು. ಮರಳು ಗಣಿಗಾರಿಕೆ ನೀತಿಯ ಅಡಿ ಮರಳು ತೆಗೆಯಲು ಅನುಮತಿ ಬೇಕು. ಇದು ಇಲ್ಲಿನ ಕಟ್ಟಡ ಕಾಮಗಾರಿಗಳಿಗೆ ಕಾಳಿ ನದಿಯಲ್ಲಿನ ಮರಳು ಗಣಿಗಾರಿಕೆ ಅಗತ್ಯವಾಗಿದೆ ಎಂದು ಮನೆ ಕಟ್ಟಡ, ಅಪಾರ್ಟಮೆಂಟ್ ನಿಮರ್ಾಣದ  ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಜಿಲ್ಲಾಡಳಿತದ ಅಪರ ಜಿಲ್ಲಾಧಿಕಾರಿ ಡಾ.ಸುರೇಶ್ ಹಿಟ್ನಾಳ ಅವರ ಮೂಲಕ ಶುಕ್ರವಾರ ನೀಡಿದವು.

ಜಿಲ್ಲೆಯ ನದಿಯ ಮರಳು ಬೇರೆ ಜಿಲ್ಲೆಗೆ ಬೇಡ:

ಉತ್ತರ ಕನ್ನಡ ಜಿಲ್ಲೆಯ ನದಿಗಳಿಂದ ಗಣಿಗಾರಿಕೆ(ಎತ್ತಿದ) ಮಾಡಿ ತೆಗೆದ ಮರಳನ್ನು ಪಕ್ಕದ ಜಿಲ್ಲೆಗೆ ರಫ್ತು ಮಾಡುವುದರ ಮೇಲೆ ನಿರ್ಬಂಧ ಹೇರಬೇಕು ಎಂದು ಅಸೋಶಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ ಅಧ್ಯಕ್ಷ ಕೃಷ್ಣಾನಂದ ಬಾಂದೇಕರ್ ಹೇಳಿದರು. ಸಕರ್ಾರಕ್ಕೆ ಮನವಿ ನೀಡಿದ ನಂತರ ಸುದ್ದಿಗೋಷ್ಠಿ ಮಾಡಿದ ಅವರು ಕಾರವಾರದಲ್ಲಿ ಮೀನುಗಾರಿಕೆ ಮತ್ತು ಬಂಗಾರದ ಆಭರಣ ತಯಾರಿಕೆ ಬಿಟ್ಟರೆ ಉಳಿದಿರುವುದು ಕಟ್ಟಡ ನಿಮರ್ಾಣ ಕೆಲಸ ಮಾತ್ರ. ಈಗ ಮರಳು ಸಿಗದೇ ಕಟ್ಟಡ ನಿಮರ್ಾಣ ಕಾಮಗಾರಿ ಸಹ ನಿಲ್ಲುವ ಹಂತಕ್ಕೆ ಬಂದಿದೆ.

ಕಾಳಿ ನದಿಯಲ್ಲಿ ಮರಳು ದಿನ್ನೆಗಳನ್ನು ಗುರುತಿಸಲಾಗಿದೆ. ಲಕ್ಷ  ಲಕ್ಷ ಕ್ಯೂಬಿಕ್ ಮೀಟರ್ ಮರಳು ಕಾರವಾರ ನಗರಕ್ಕೆ ಬೇಕಾಗುತ್ತದೆ. ಹಾಗಾಗಿ ಕಾಳಿ ನದಿಯಲ್ಲಿ ಮರಳು ಗಣಿಗಾರಿಕೆಗೆ ಅನುಮತಿ ನೀಡಬೇಕು. ಸಕರ್ಾರ ಎಲ್ಲಾ ನಿರ್ಬಂಧ ಹಾಕಿ ಗಣಿಗಾರಿಕೆಗೆ ಅನುಮತಿ ನೀಡಲಿ. ಪರಿಸರ ಸಮತೋಲನದ ಜೊತೆಗೆ ಉದ್ಯಮವೂ ನಡೆಯಬೇಕಿದೆ. ಜಿಲ್ಲೆಯ ನದಿಗಳ ಮರಳು ಗಣಿಗಾರಿಕೆ ಮಾಡಿದ ಮರಳು ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಗೆ ರಫ್ತು, ಸಾಗಾಟ ಹಾಗೂ ಮಾರಾಟದ ಮೇಲೆ ಜಿಲ್ಲಾಡಳಿತ ನಿರ್ಬಂಧ ಹೇರಲಿ. ಆಗ ಸ್ಥಳೀಯರಿಗೆ ಮರಳು ಸಿಗುವಂತಾಗುತ್ತದೆ ಎಂದರು. ಮರಳು ಸಮಸ್ಯೆಗೆ ನ.18 ರೊಳಗೆ ಜಿಲ್ಲಾಡಳಿತ ಪರಿಹಾರ ಹುಡಕಬೇಕು. ಇಲ್ಲದೇ ಹೋದರೆ ನ,19 ರಂದು ಸಾಂಕೇತಿಕ ಧರಣಿ ಮಾಡಲಾಗುವುದು. ಆಗಲೂ ಸಮಸ್ಯೆ ಬಗೆಹರಿಯದಿದ್ದರೆ ಮರಳು ಗಣಿಗಾರಿಕೆ ಉದ್ಯಮಿಗಳು ,ಕಾಮರ್ಿಕರು, ಸಾರ್ವಜನಿಕರ ಸಹಕಾರ ಪಡೆದು ದೊಡ್ಡ ಮಟ್ಟದ ಹೋರಾಟ ರೂಪಿಸಲಾಗುವುದು ಎಂದರು. 

ಕರಾವಳಿ ಉತ್ಸವಕ್ಕೆ ಬಹಿಷ್ಕಾರ: 

ಮರಳು ಸಮಸ್ಯೆ ಬಗೆಹರಿಸದಿದ್ದರೆ ಕರಾವಳಿ ಉತ್ಸವಕ್ಕೆ ಬಹಿಷ್ಕಾರ ಹಾಕುತ್ತೇವೆ ಎಂದು ಸಿವಿಲ್ ಎಂಜಿನಿಯರ್ಸ ಸಂಘದ ಕಾರ್ಯದಶರ್ಿ ಗೋವೇಕರ್ ಹೇಳಿದರು. ಕಾರವಾರದ ಜನರು ಕಷ್ಟದಲ್ಲಿದ್ದಾರೆ. ಮರಳು ಸಿಗುತ್ತಿಲ್ಲ. ಎಂ ಸ್ಯಾಂಡ್ ಕಲಬೆರಕಿ ಬರುತ್ತಿದೆ. ಮೇಲಾಗಿ ಅದು ದುಬಾರಿಯಾಗಿದೆ. ಅದನ್ನು ಬಳಸಲು ಮಧ್ಯಮ ವರ್ಗದವರು ಅನುಮಾನ ಪಡುತ್ತಿದ್ದಾರೆ ಎಂದರು. ಎಂ ಸ್ಯಾಂಡ್ನ್ನು ಸಕರ್ಾರಿ ಕಾಮಗಾರಿಗಳಿಗೆ ಬಳಸಲಿ. ಸಂಪ್ರದಾಯಿಕ ಮರಳನ್ನು ಜನರಿಗೆ, ಖಾಸಗಿ ಕಟ್ಟಡ ನಿಮರ್ಾಣ ಸಂಸ್ಥೆಗಳಿಗೆ ನೀಡಲಿ ಎಂದರು. 

ಹಳಿಯಾಳದಲ್ಲಿ, ಶಿರಸಿಯಲ್ಲಿ ಮರಳು ಡಿಪೋ ಮಾಡಲಾಗಿದೆ. ಜಿಲ್ಲಾಕೇಂದ್ರವಾದ ಕಾರವಾರದಲ್ಲಿ ಮರಳು ಡಿಪೋ ಯಾಕೆ ಬೇಡ ಎಂದು ಅವರು ಪ್ರಶ್ನಿಸಿದರು. ಕೈಗಾ, ಸೀಬರ್ಡ ಯೋಜನೆಗಳು ಇನ್ನು ನಿಮರ್ಾಣ ಹಂತದಲ್ಲಿವೆ. ಸೀಬರ್ಡ ಪ್ರೋಜೆಕ್ಟ್ ಎರಡನೇ ಹಂತ ನಡೆದಿದೆ. ಕೈಗಾ 5-6 ಬರಲಿದೆ. ಹಾಗಾಗಿ ಇಲ್ಲಿ ಮರಳು ಗಣಿಗಾರಿಕೆ ಬೇಕು. ಮರಳು ಡಿಪೋ ಸಹ ಬೇಕು ಎಂದರು. 7 ವರ್ಷಗಳ ಹಿಂದೆ ನಡೆದೆ ಗೊತ್ತು ಗುರಿಯಿಲ್ಲದ ಮರಳು ಗಣಿಗಾರಿಕೆ ಸಕರ್ಾರ ಹೊಣೆ. ಸಕರ್ಾರ ಆಗಲೇ ಮರಳು ನೀತಿ ರೂಪಿಸಿ, ರಾಜಧನ ಸಂಗ್ರಹಸಿದ್ದರೆ ಇವತ್ತಿನ ನಿರ್ಬಂಧ ಬರುತ್ತಿರಲಿಲ್ಲ. ಹಾಗಾಗಿ ಸಕರ್ಾರವೇ ಈ ಸಮಸ್ಯೆ ಸರಿಪಡಿಸಬೇಕು ಎಂದರು.

ಪ್ರದೀಪ ಗುನಗಿ,ನೂರ್ ಅಹಮ್ಮದ್, ಆಕರ್ಿಟೆಕ್ಟ ಅಸೋಸಿಯೇಶನ್ ಸಂಘದ ಅಧ್ಯಕ್ಷೆ, ಕಾರ್ಯದಶರ್ಿ, ಸೆಂಟರಿಂಗ್ ಕಾಮಗಾರಿ ಸಂಘಟನೆಯ ಅಧ್ಯಕ್ಷ, ಉಪಾಧ್ಯಕ್ಷ ಪದಾಧಿಕಾರಿಗಳು ಉಪಸ್ಥಿತರಿದ್ದರು.