ಬೆಳಗಾವಿ: 14 :2018-19 ನೇ ಸಾಲಿನ ಆಯವ್ಯಯದಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಾಗಿ ಒಟ್ಟು 29,209.47 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖಗರ್ೆ ವಿಧಾನಸಭೆಯಲ್ಲಿ ಇಂದು ತಿಳಿಸಿದರು.
ಪ್ರಶ್ನೋತ್ತರ ಕಲಾಪ ವೇಳೆಯಲ್ಲಿ ಶಾಸಕ ಗೋವಿಂದ ಕಾರಜೋಳ ಅವರ ಪ್ರಶ್ನೆಗೆ ಉತ್ತರಿಸಿ ಅವರು 2018-19 ನೇ ಸಾಲಿನ ಆಯವ್ಯಯದಲ್ಲಿ ವಿಶೇಷ ಘಟಕ ಯೋಜನೆಗೆ 20,709.58 ಕೋಟಿ ರೂ. ಹಾಗೂ ಗಿರಿಜನ ಉಪ ಯೋಜನೆಯಡಿ 8500.89 ಕೋಟಿ ರೂ. ಸೇರಿದಂತೆ ಒಟ್ಟು 29,209.47 ಕೋಟಿ ರೂ. ನಿಗದಿಪಡಿಸಲಾಗಿದೆ. ಈ ಪೈಕಿ ಈಗಾಗಲೇ 146.04 ಕೋಟಿ ಬಿಡುಗಡೆ ಮಾಡಲಾಗಿದ್ದು 95.06 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.
ಈಗಾಗಲೇ ವಿವಿಧ ಇಲಾಖೆಗಳಿಗೆ ಈ ಎರಡೂ ಯೋಜನೆಗಳಡಿ ಅನುದಾನ ನಿಗದಿಗೊಳಿಸಿ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಈ ಹಂತದಲ್ಲಿ ಅನುದಾನವನ್ನು ಬೇರೊಂದು ಉದ್ದೇಶಕ್ಕೆ ಬಳಸಲು ಅವಕಾಶವಿರುವುದಿಲ್ಲ. ಭೂ-ಒಡೆತನ ಯೋಜನೆಯಡಿ ಈಗಾಗಲೇ ಡಾ ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಮಹಷರ್ಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಭೂ ಒಡೆತನ ಯೋಜನೆಗೆ ಅನುದಾನವನ್ನು ಮೀಸಲಿರಿಸಲಾಗಿದೆ ಎಂದು ಉಪ ಪ್ರಶ್ನೆಯೊಂದಕ್ಕೆ ಅವರು
ಉತ್ತರಿಸಿದರು.
ಡಾ ಅನ್ನದಾನಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯಾದ್ಯಂತ ಭೂ ಒಡೆತನ ಯೋಜನೆಯಡಿ ಡಾ ಬಿ. ಆರ್ .ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2016-17 ನೇ ಸಾಲಿನಿಂದ 2018-19 ನೇ ಸಾಲಿನವರೆಗೆ ಒಟ್ಟು 3302 ಫಲಾನುಭವಿಗಳಿಗೆ 4118.36 ಎಕರೆ ಭೂಮಿಯನ್ನು ಖರೀದಿಸಲಾಗಿದೆ. ಮಹಷರ್ಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2016-17 ಮತ್ತು 2017-18 ನೇ ಸಾಲಿನಲ್ಲಿ 514 ಫಲಾನುಭವಿಗಳಿಗೆ 601.09 ಎಕರೆ ಭೂಮಿಯನ್ನು ಖರೀದಿಸಲಾಗಿದೆ ಎಂದು ಸಚಿವರು ಅಂಕಿ-ಅಂಶಗಳನ್ನು ನೀಡಿದರು