ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಪೌರಕಾರ್ಮಿಕರಿಗೆ ಸೌಲಭ್ಯಗಳು ಸಮರ​‍್ಕವಾಗಿ ತಲುಪಿಸಿ: ಡಿಸಿ ನಲಿನ್ ಅತುಲ್‌

Safai Karmachari District Level Awareness Committee Meeting Deliver facilities to civic workers in a

ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಪೌರಕಾರ್ಮಿಕರಿಗೆ ಸೌಲಭ್ಯಗಳು ಸಮರ​‍್ಕವಾಗಿ ತಲುಪಿಸಿ: ಡಿಸಿ ನಲಿನ್ ಅತುಲ್‌

ಕೊಪ್ಪಳ 24 : ಜಿಲ್ಲೆಯ ಎಲ್ಲಾ ಪೌರಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ​‍್ಕವಾಗಿ ತಲುಪಿಸಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು. 

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನಗರಾಭಿವೃದ್ಧಿಕೋಶ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಪ್ರತಿ ತಿಂಗಳೂ ಸರಿಯಾಗಿ ವೇತನ ನೀಡುವುದರ ಜೊತೆಗೆ ಇಎಸ್‌ಐ ಮತ್ತು ಪಿಎಫ್ ವಂತಿಕೆಯನ್ನು ಸಕಾಲದಲ್ಲಿ ಪಾವತಿಸಬೇಕು. ಮಾಸಿಕ ವೇತನ ಹಾಗೂ ಇಎಸ್‌ಐ ಮತ್ತು ಪಿಎಫ್ ವಂತಿಕೆ ಪಾವತಿ ಯಾವುದಾದರೂ ಬಾಕಿ ಇದ್ದಲ್ಲಿ, ಅದನ್ನು ತ್ವರಿತವಾಗಿ ಪಾವತಿಸಲು ಕ್ರಮ ಕೈಗೊಳ್ಳಬೇಕು. ಪೌರಕಾರ್ಮಿಕರಿಗೆ ವರ್ಷದಲ್ಲಿ ಎರಡು ಜೊತೆ ಸಮವಸ್ತ್ರಗಳನ್ನು ಕಡ್ಡಾಯವಾಗಿ ವಿತರಿಸಿ, ಅವಶ್ಯಕತೆಗಳಿಗೆ ಅನುಗುಣವಾಗಿ ಸುರಕ್ಷಾ ಪರಿಕರಗಳಾದ ಮಾಸ್ಕ್‌, ಶೂಸ್, ಹ್ಯಾಂಡ್ ಗ್ಲೌಸ್, ರೇನಕೋಟ್ ಮತ್ತು ಹೆಲ್ಮೆಟ್‌ಗಳನ್ನು ಸರಿಯಾದ ಸಮಯದಲ್ಲಿ ವಿತರಣೆ ಮಾಡಬೇಕು. ಪ್ರತಿದಿನ ಉತ್ತಮ ಟಿಫಿನ್ ವ್ಯವಸ್ಥೆ ಮಾಡಬೇಕು ಎಂದರು.ಪೌರಕಾರ್ಮಿಕರ ಆರೋಗ್ಯ ತಪಾಸಣೆಯನ್ನು ನಿಯಮಾನುಸಾರ ಕೈಗೊಳ್ಳಬೇಕು. ಅಲ್ಲದೇ ವಿವಿಧ ಯೋಜನೆಗಳಡಿ ಸಫಾಯಿ ಕರ್ಮಚಾರಿಗಳಿಗೆ ಇರುವ ಸೌಲಭ್ಯಗಳನ್ನೂ ಸಹ ನಿಗದಿತ ಅವಧಿಯಲ್ಲಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ರಾಮ್ ಎಲ್ ಅರಸಿದ್ದಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿ.ಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶಿಲ್ದಾರರು, ಇ.ಓ.ಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ವಿಜಿಲೆನ್ಸ್‌ ಸಮಿತಿ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.