ಕ್ವಾರಂಟೈನ್ ಕೇಂದ್ರದಲ್ಲಿ ಆರೋಗ್ಯ ಸ್ಥಿತಿಗನುಸಾರ ಪ್ರತ್ಯೇಕಿಸಿ ನಿಗಾ ವಹಿಸಿ: ಮನೋಜ್ ಜೈನ್

ಹಾವೇರಿ: ಮೇ .28: ಸಾಂಸ್ಥಿಕ ಕ್ವಾರಂಟೈನ್ನಲ್ಲಿರುವವರನ್ನು ಅವರ ಆರೋಗ್ಯ, ವಯೋಮಾನಕ್ಕನುಗುಣವಾಗಿ ಪ್ರತ್ಯೇಕವಾಗಿಸಿ ನಿಗಾವಹಿಸಲು ಕನರ್ಾಟಕ ಸಕರ್ಾರದ ಸಾರ್ವಜನಿಕ ಜಮೀನುಗಳ ನಿಗಮದ ವ್ಯವಸ್ಥಾಪಕ ನಿದರ್ೆಶಕ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಮನೋಜ್ ಜೈನ್ ಅವರು ಸೂಚನೆ ನೀಡಿದರು.

ಕೊರೊನಾ ವೈರಸ್ ಹರಡುವಿಕೆಯ ನಿಯಂತ್ರಣ ಕುರಿತಂತೆ ಕೋವಿಡ್ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಭೆ ನಡೆಸಿದ ಅವರು ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬರುವವರ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ತೀವ್ರ ನಿಗಾವಹಿಸಬೇಕು. ಆರೋಗ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳು ಸಮನ್ವಯ ಹಾಗೂ ಚುರುಕಿನಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಕ್ವಾರಂಟೈನ್ನಲ್ಲಿರುವ ಪ್ರತಿಯೊಬ್ಬರ ಹೆಲ್ತ್ಪ್ರೋಪೈಲ್ ಚೆಕ್ಮಾಡಿ, 55 ರಿಂದ 60 ವರ್ಷಕ್ಕಿಂತ ಹೆಚ್ಚು ವಯಸ್ಸಾದವರು, 10 ವರ್ಷದೊಳಗಿನ ಮಕ್ಕಳು, ಗಭರ್ಿಣಿಯರು, ಬಿ.ಪಿ., ಶುಗರ್, ಹೃದಯ ಸಂಬಂಧಿ ಕಾಯಿಲೆಗಳು, ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾದವರನ್ನು ಕ್ವಾರಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ಅವರ ಆರೋಗ್ಯ ತಪಾಸಣೆ ಸೇರಿದಂತೆ ತೀವ್ರ ಕಾಳಜಿ ವಹಿಸಬೇಕು. ಆರೋಗ್ಯವಂತರು, ರಿಸ್ಕಿಪಿಪಲ್ಗಳನ್ನು ಒಟ್ಟಾಗಿ ಸೇರಿಸದೇ ಪ್ರತ್ಯೇಕಿಸಿ ಎಂದು ಸಲಹೆ ನೀಡಿದರು.

ಆರೋಗ್ಯ ಇಲಾಖೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಸರ್ವಲೆನ್ಸ್ ಅಧಿಕಾರಿಗಳು ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳು ಪರಸ್ಪರ ಸಮನ್ವಯದಿಂದ ಮಾಹಿತಿಯನ್ನು ವಿನಮಯಮಾಡಿಕೊಳ್ಳಬೇಕು. ಪ್ರತಿದಿನದ ಪ್ರತಿಕ್ಷಣದ ಮಾಹಿತಿಗಳನ್ನು ಅಪ್ಡೆಟ್ ಮಾಡಿಕೊಳ್ಳಬೇಕು. ಸೂಚಿಸಿದರು.ಟಿಬಿ ಹಾಗೂ ಎಚ್.ಐ.ವಿ. ಸೋಂಕಿತರ ಆರೋಗ್ಯದ ಬಗ್ಗೆ ತೀವ್ರ ನಿಗಾವಹಿಸಬೇಕು. ಅವರಿಗೆ ಅವಶ್ಯವಿರುವ ಔಷಧಿಗಳನ್ನು ಮುಂಚಿತವಾಗಿ ನೀಡಬೇಕು. ಎಚ್.ಐ.ವಿ. ಕೌನ್ಸಿಲರ್ಗಳು ಪ್ರತಿದಿನ ದೂರವಾಣಿ ಮೂಲಕ ಎಚ್.ವಿ. ಬಾಧಿತರೊಂದಿಗೆ ಸಮಾಲೋಚನೆ ನಡೆಸಬೇಕು. ಪ್ರತಿ ಕೌನ್ಸಿಲರ್ ಕನಿಷ್ಠ 50 ಎಚ್.ಐ.ವಿ.ಬಾಧಿತರೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಸೂಚನೆ ನೀಡಿದರು.

ಆಹಾರ ಕಿಟ್ಗಳ ವಿತರಣೆ, ವಲಸೆ ಕಾಮರ್ಿಕರ ಪ್ರಯಾಣದ ಮಾಹಿತಿ, ಕ್ವಾರಂಟೈನ್ಗಳ ಮಾಹಿತಿ, ಸಮುದಾಯ ಆರೋಗ್ಯ ತಪಾಸಣೆ, ಹೆಲ್ತ್ ವಾಚ್ ಸವರ್ೆ, ಕ್ವಾರಂಟೈನ್ ವಾಚ್ ಆ್ಯಪ್, ಕಾಂಟ್ಯಾಕ್ಟ್ ಟ್ರೇಸಿಂಗ್ ಆ್ಯಪ್ಗಳಿಗೆ ಮಾಹಿತಿ ಅಪ್ಡೆಟ್ ಮಾಹಿತಿ, ಕಂಟೆನ್ಮೆಂಟ್ ಹಾಗೂ ಬಫರ್ ಜೋನ್ಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸಭೆಯಲ್ಲಿ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ, ಉಪವಿಭಾಗಾಧಿಕಾರಿಗಳಾದ ಡಾ.ದಿಲೀಷ್ ಶಶಿ, ಅನ್ನಪೂರ್ಣ ಮುದಕಮ್ಮನವರ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೆಶಕಿ ಚೈತ್ರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಕೆ.ಹಾವನೂರ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಜಯಾನಂದ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಇತರರು ಉಪಸ್ಥಿತರಿದ್ದರು.