ಮುಂಡಗೋಡ 11: ತಾಲೂಕಿನ ಸಾಲಗಾಂವ ಪಂಚಾಯತ್ ವ್ಯಾಪ್ತಿಯಲ್ಲಿ ಮಂಗಳವಾರ ಶಾಸಕ ಶಿವರಾಮ ಹೆಬ್ಬಾರ್ ಅವರು ವೀರಭದ್ರೇಶ್ವರ ದೇವಸ್ಥಾನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಮತ್ತು ನೂತನ ಡಿಜಿಟಲ್ ಗ್ರಂಥಾಲಯವನ್ನು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಗ್ರಂಥಾಲಯದ ಉಪಯೋಗವನ್ನು ಸರ್ವರು ಪಡೆದು ಕೊಳ್ಳಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಅವರ ಮಾತಾಡನಾಡಿದ್ದರು.
ಈ ವೇಳೆಯಲ್ಲಿ ಮಾಜಿ ಶಾಸಕ ವಿ.ಎಸ್ .ಪಾಟೀಲ್, ಗ್ರಾ.ಪಂ ಅಧ್ಯಕ್ಷ ಗಣಪತಿ ಬಾಳಮ್ಮನವರ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ನಿಕಟಪೂರ್ವ ಅಧ್ಯಕ್ಷ ಜ್ಞಾನೇಶ್ವರ ಗುಡಿಯಾಳ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರವಿಗೌಡಪಾಟೀಲ್, ಪ್ರಮುಖರಾದ ಎಚ್.ಎಂ. ನಾಯ್ಕ, ಮಡ್ಡಿ, ಸಿದ್ದಪ್ಪ ಹಡಪದ, ಗುಡ್ಡಪ್ಪ ಕಾತೂರ, ರಾಜು ಗುಬ್ಬಕನವರ, ಹಾಗೂ ಉಪಸ್ಥಿತರಿದ್ದರು.