ಎಸ್, ಎಸ್, ಎಲ್, ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ

Talent awards for SSLC and PUC students: Honor ceremony for retired employees

ಜಮಖಂಡಿ 02 : ಜೀವನದಲ್ಲಿ ಯಶಸ್ಸು ದೊರೆಯಬೇಕಾದರೆ ವಿದ್ಯಾರ್ಥಿಗಳು ಶಿಸ್ತು, ನಾಯಕತ್ವದ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಯಶಸ್ಸು ದೊರೆಯಲು ಸಾಧ್ಯ ಎಂದು ರಾಜ್ಯ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು. 

ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ತಾಲೂಕಾ ಗಾಣಿಗ ಸಮಾಜ ಹಾಗೂ ತಾಲೂಕಾ ಗಾಣಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಸಹಯೋಗದಲ್ಲಿ ಎಸ್, ಎಸ್, ಎಲ್, ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಎಷ್ಟು ಅಂಕ ಪಡೆದರು ಕಡಿಮೆ, ನೀವು ಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಕೇವಲ ಶಾಲಾ-ಕಾಲೇಜುಗಳಲ್ಲಿ ಉತ್ತಮ ಅಂಕಗಳನ್ನು ಪಡೆದರೆ ಸಾಲದು, ನಿಮಗೆ ನಾಯಕತ್ವದ ಗುಣಗಳು ತಿಳಿದಿರಬೇಕು, ನಿಮ್ಮ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡಿರಬೇಕು, ನಿಮ್ಮ ಸುತ್ತಮುತ್ತ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಗೊತ್ತಿರಬೇಕು, ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವಿರಬೇಕು, ಉತ್ತಮ ಮಾತುಗಾರಿಕೆಯ ಕೌಶಲ್ಯವನ್ನು ಹೊಂದಿರಬೇಕು, ನೀವುಗಳು ಈಗಿನಿಂದಲೇ ನಿಮ್ಮಲ್ಲಿ ಒಳ್ಳೆಯ ಗುಣಗಳನ್ನು, ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕು ಎಂದರು. 

ಸಮಾಜದಲ್ಲಿ ಎಲ್ಲರ ಜೊತೆ ಒಳ್ಳೆ ಬಾಂಧವ್ಯಗಳನ್ನು ಬೆಸೆಯಬೇಕು, ಸಮಾಜದ ಮಕ್ಕಳನ್ನು ಗುರುತಿಸುವುದರ ಜೊತೆಗೆ ಬೇರೆ ಸಮಾಜದಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯ ಮಾಡಬೇಕು. ಗಾಣಿಗ ಸಮಾಜದ ಬ್ಯಾಂಕ್ ಇದ್ದು. ಅದರ ಆಡಳಿತ ಮಂಡಳಿಯವರು ಪ್ರತಿಭಾವಂತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಹಣಕಾಸಿನ ತೊಂದರೆ ಇರುತ್ತದೆ. ಅದಕ್ಕಾಗಿ ಬ್ಯಾಂಕ್ ಸಿಬ್ಬಂದಿಗಳು ಹಣಕಾಸಿನ ವ್ಯವಸ್ಥೆಯನ್ನು ಸಾಲದ ರೂಪದಲ್ಲಿ ನೀಡಿದರೆ ಮಕ್ಕಳು ಉನ್ನತ ಶಿಕ್ಷಣವನ್ನು ಮುಂದುವರಿಸಿ. ಉನ್ನತ ಅಧಿಕಾರಿಗಳು ಆಗಲು ಸಾಧ್ಯವಾಗುತ್ತದೆ ಎಂದು ಕಿವಿ ಮಾತು ಹೇಳಿದರು.  

ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಎಸ್‌.ನ್ಯಾಮಗೌಡ ಮಾತನಾಡಿ, ಉನ್ನತ ಹುದ್ದೆಯಲ್ಲಿರುವವರು ಅನಕೂಲಸ್ತರು ಸಮಾಜದಲ್ಲಿನ ಬಡ ವಿದ್ಯಾರ್ಥಿಗಳಿಗೆ ಸಹಾಯಹಸ್ತ ನೀಡುವ ಮನೊಭಾವ ಬೆಳೆಸಿಕೊಳ್ಳಬೇಕು ಎಂದರು. 

ತಾಲೂಕಾ ಗಾಣಿಗ ಸಮಾಜದ ಅಧ್ಯಕ್ಷ ಕೆ.ಕೆ.ತುಪ್ಪದ ಮಾತನಾಡಿ, ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಲೆಂದು ಸತತವಾಗಿ 16 ವರ್ಷಗಳಿಂದ ನಡೆದುಕೊಂಡು ಬಂದಿದೆ, ಪ್ರತಿವರ್ಷ ಎಸ್,ಎಸ್,ಎಲ್,ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮಾಡಿ ಅವರು ಇನ್ನು ಹೆಚ್ಚಿಗೆ ಸಾಧನೆ ಮಾಡಲೆಂದು ಅವರನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.  

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ :ಎಸ್,ಎಸ್,ಎಲ್,ಸಿಯಲ್ಲಿ ಹೆಚ್ಚು ಅಂಕ ಪಡೆದ 56 ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಹಾಗೂ ಪಿಯುಸಿಯಲ್ಲಿ 51 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ, ಹಾಗೂ ಜಿಲ್ಲೆಗೆ,ತಾಲೂಕಿಗೆ ಪ್ರಥಮ ಸ್ಥಾನ ಪಡೆದ 4 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಹಾಗೂ ನಿವೃತ್ತ ಯೋಧರು, ನಿವೃತ್ತ ನೌಕರರು ಸೇರಿದಂತೆ ಸಾಧಕರಿಗೆ ಸನ್ಮಾನ ಮಾಡಲಾಯಿತು. 

ಇದೇ ಸಂದರ್ಭದಲ್ಲಿ ವಕೀಲ ಎನ್,ಎಸ್, ದೇವರವರ ಮಾತನಾಡಿದರು, ದಿವ್ಯ ಸಾನಿಧ್ಯವನ್ನು ವಹಿಸಿದ ಪ,ಪೂ, ಸಿದ್ಧಮುತ್ಯಾ ಶ್ರೀಗಳು ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಪರಮಾನಂದ ಗೌರೋಜಿ, ಮುಖ್ಯ ಪಶು ವೈದ್ಯಾಧಿಕಾರಿ ರಾಜಕುಮಾರ ನಾಗರಹಳ್ಳಿ, ನಗರಸಭೆಯ ಆಯುಕ್ತ ಜ್ಯೋತಿ ಗೀರೀಶ, ಸಿಪಿಐ ಮಲ್ಲಪ್ಪ ಮಡ್ಡಿ, ಜ್ಯೋತಿ ಕೋ,ಅಫ್, ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಸಂಗಪ್ಪ ದಡ್ಡಿಮನಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಗದೇವ ಪಾಸೋಡಿ, ವೀರೇಂದ್ರ ಕಲೂತಿ, ಶಾಂತಾ ನ್ಯಾಮಗೌಡ, ರಾಜಶ್ರೀ ನ್ಯಾಮಗೌಡ, ಸಿದ್ರಾಮ ಜಂಬಗಿ, ಮಲ್ಲಿಕಾರ್ಜುನ ನಿಂಗನೂರ ಸೇರಿದಂತೆ ಅನೇಕರು ಇದ್ದರು. ಎಸ್,ಕಟ್ಟಿಮನಿ ಪ್ರಾರ್ಥಿಸಿದರು. ಸಿ,ಕೆ,ಹೊಸುರ ಸ್ವಾಗತಿಸಿದರು. ಕವಿತಾ ರಾಮದುರ್ಗ, ಸಿ,ಜಿ,ಕಡೋಳ ನಿರೂಪಿಸಿದರು, ಎನ್,ಜಿ,ನ್ಯಾಮಗೌಡ ವಂದಿಸಿದರು.