ಹಾವೇರಿ 11 : ಪ್ರಗತಿಪರ ರೈತರು, ಸಮಾಜ ಸೇವಕರಾದ ಮಲ್ಲೇಶಪ್ಪ ಅಂಗಡಿ ಅವರ ಕುರಿತಾದ ‘ಪರೋಪಕಾರಿ ಅಂಗಡಿ ಮಲ್ಲೇಶಪ್ಪನವರ ವ್ಯಕ್ತಿತ್ವ ದರ್ಶನ’ ಪುಸ್ತಕ ಬಿಡುಗಡೆ ಸಮಾರಂಭವನ್ನು ಜೂ.15ರಂದು ಬೆಳಗ್ಗೆ 10.30ಕ್ಕೆ ತಾಲೂಕಿನ ಕೆಸರಳ್ಳಿ ಗ್ರಾಮದ ಕಲ್ಮೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸಾಹಿತಿ ಸಿ.ಎಸ್.ಮರಳಿಹಳ್ಳಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ಪುಸ್ತಕ ಲೋಕಾರೆ್ಣಗೊಳಿಸಲಿದ್ದಾರೆ. ಹೊಸರಿತ್ತಿ ಗುದ್ದಲೀಸ್ವಾಮಿಮಠದ ಗುದ್ದಲೀಶ್ವರ ಸ್ವಾಮೀಜಿ, ಲಿಂಗನಾಯಕನಹಳ್ಳಿ ಚನ್ನವೀರ ಸ್ವಾಮೀಜಿ, ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ನೆಗಳೂರು ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಸ್ವಾಮೀಜಿ, ಅಕ್ಕಿಆಲೂರಿನ ಶಿವಬಸವ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಗಣ್ಯ ವರ್ತಕರಾದ ನಿರಂಜನಪ್ಪ ಪಾವಲಿ, ವಿಶ್ರಾಂತ ಜಿಲ್ಲಾ ಮುಖ್ಯ ನ್ಯಾಯಾಧೀಶರಾದ ಸಿ.ಎಸ್.ಮರಗೂರ ಘನ ಉಪಸ್ಥಿತಿಯಲ್ಲಿ, ವೈದ್ಯರಾದ ಡಾ.ಮೃತ್ಯುಂಜಯ ಹಿರೇಮಠ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ರಾಜ್ಯ ವಿಧಾನಸಭೆ ಉಪಸಭಾಪತಿ, ಶಾಸಕ ರುದ್ರ್ಪ ಲಮಾಣಿ, ರಾಜ್ಯ ಅರಣ್ಯ ನಿಗಮದ ಅಧ್ಯಕ್ಷ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ಮಾಜಿ ಸಂಸದ ಶಿವಕುಮಾರ ಉದಾಸಿ, ಮಾಜಿ ಶಾಸಕರಾದ ಶಿವರಾಜ ಸಜ್ಜನರ, ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಪೂಜಾರ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಎಸ್.ಕೋರಿಶೆಟ್ಟರ್, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ಡಾ.ಕೆ.ಎಚ್.ಮುಕ್ಕಣ್ಣನವರ, ವೈ.ಬಿ.ಆಲದಕಟ್ಟಿ, ರುದ್ರ್ಪ ಹಳ್ಳಿಕೇರಿ, ರಾಜೇಂದ್ರ್ರಸಾದ ಹಳ್ಳಿಕೇರಿ, ರಮೇಶ ಏಕಬೋಟೆ, ವೀರಣ್ಣ ಚಕ್ಕಿ ಪಾಲ್ಗೊಳ್ಳಲಿದ್ದಾರೆ ಎಂದರು.
ಅಂಗಡಿ ಮಲ್ಲೇಶಪ್ಪನವರು ಕೃಷಿ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರೂ ಎಲೆ ಮರೆಯ ಕಾಯಿಯಂತೆ ಬದುಕಿದ್ದಾರೆ. ಹಾವೇರಿ ಎಪಿಎಂಸಿ ಚೇರಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಪ್ರಾಮಾಣಿಕತೆ, ದಕ್ಷತೆ ಹಾಗೂ ನಿಸ್ವಾರ್ಥ ಮನೋಭಾವದೊಂದಿಗೆ ಕೆಲಸ ಮಾಡಿ ಹೆಸರುವಾಸಿಯಾಗಿದ್ದಾರೆ. ಇಂತಹ ಹಿರಿಯ ವ್ಯಕ್ತಿಗಳ ಆದರ್ಶ, ಮೌಲ್ಯಗಳನ್ನು ಭವಿಷ್ಯದ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಅವರ ವ್ಯಕ್ತಿತ್ವದ ಕುರಿತ ಗ್ರಂಥವನ್ನು ರಚಿಸಿ ಬಿಡುಗಡೆಗೊಳಿಸಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಂಗಡಿ ಮಲ್ಲೇಶಪ್ಪ ಅವರ ಪುತ್ರ ದಾನಪ್ಪ ಅಂಗಡಿ, ಬಾಬಣ್ಣ ಮಾಮಲೇದೇಸಾಯಿ ಇದ್ದರು.