ಗದಗ 06: ಜನಸಾಮಾನ್ಯರಿಗೆ ಅಭಿವೃದ್ಧಿಯ ಲಾಭ ನೇರವಾಗಿ ತಲುಪಬೇಕು ಹಾಗೂ ಸ್ಥಳಿಯ ಸಮಸ್ಯೆಗಳನ್ನು ಅದೇ ಮಟ್ಟದಲ್ಲಿ ಪರಿಹಾರವಾಗಬೇಕು ಎಂಬ ಸದಾಶಯದಿಂದ ರಾಜ್ಯದಲ್ಲಿ ಪಂಚಾಯತರಾಜ್ ವ್ಯವಸ್ಥೆಯಲ್ಲಿ ವಿಕೇಂದ್ರೀಕೃತ ಯೋಜನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಆಶಯಕ್ಕೆ ಪೂರಕವಾಗುವಂತೆ ಗ್ರಾ.ಪಂ. ತಾ.ಪಂ. ಹಾಗೂ ಜಿ.ಪಂ. ಮಟ್ಟದಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕಿದೆ ಎಂದು ಗದಗ ಜಿ.ಪಂ. ಅಧ್ಯಕ್ಷ ಎಸ್.ಪಿ.ಬಳಿಗಾರ ನುಡಿದರು.
ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಂಚಾಯತ ರಾಜ್ ವ್ಯವಸ್ಥೆಯಲ್ಲಿ ವಿಕೇಂದ್ರಿಕೃತ ಯೋಜನಾ ಅನುಷ್ಠಾನ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಕಾರ್ಯಗಾರ ಉದ್ದೇಶಿಸಿ ಅವರು ಮಾತನಾಡಿದರು.
ಕಾರ್ಯಗಾರದಲ್ಲಿ ಭಾಗವಹಿಸಿದ ಕೇರಳ ಸಕರ್ಾರದ ನಿವೃತ್ತಿ ಮುಖ್ಯ ಕಾರ್ಯದಶರ್ಿ ವಿಜಯಾನಂದ ಅವರು ಮಾತನಾಡಿ ಪ್ರತಿಯೊಂದು ಇಲಾಖೆಯ ಸಂಬಂಧ ಪಟ್ಟ ಯೋಜನೆಗಳ ಕುರಿತು ಅಧಿಕಾರಿಗಳು ಜನರ ಆಶಯ ಮತ್ತು ಅವಶ್ಯಕತೆ ಅರಿತು ನಿಷ್ಠಯಿಂದ ಕಾರ್ಯ ನಿರ್ವಹಿಸಲು ನಾಯಕತ್ವ ಗುಣ ಹಾಗೂ ಆತ್ಮ ಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು ಎಂದರು. ಗ್ರಾಮದ ಜನತೆಯ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಮಕ್ಕಳ ಶಿಕ್ಷಣದ ಸಾರ್ವಜನಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಬಡತನ ಕುಟುಂಬಗಳನ್ನು ಗುರುತಿಸಿ ಅವುಗಳ ಸುಧಾರಣೆಗೆ ಕ್ರಮವಹಿಸಬೇಕು. ಗ್ರಾಮ ಪಂಚಾಯತ ಮಟ್ಟದ ಅಧಿಕಾರಿಗಳು ನಿಗದಿತವಾಗಿ ಗ್ರಾಮ ಸಭೆ ನಡೆಸಿ ಅಭಿವೃದ್ಧಿಯ ಕುರಿತು ಜನರಿಗೆ ಮಾಹಿತಿಯನ್ನು ನೀಡಬೇಕು ಜೊತೆಗೆ ಅವರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಪ್ರಯತ್ನಸಬೇಕು. ಸಂಬಂಧಿತ ಅಧಿಕಾರಿಗಳು ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿ ಮಾಡಿ ಅವುಗಳ ಜಾರಿಗೆ ಶ್ರಮವಹಿಸಬೇಕು ಎಂದು ವಿಜಯಾನಂದ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಗಾರದಲ್ಲಿ ಮಾತನಾಡಿದ ಗಣೇಶ ಪ್ರಸಾದ ಪ್ರತಿಯೊಂದು ಗ್ರಮವು ತನ್ನ ಅವಶ್ಯಕತೆಗಳಿಗೆ ಹಾಗೂ ಜನರ ಬೇಡಿಕೆಗಳಿಗೆ ಅನುಗುಣವಾಗಿ ಅಭಿವೃದ್ಧಿ ಪಡಿಸಲು ಎಲ್ಲ ಹಂತದ ಅಧಿಕಾರಿಗಳು ಜಾಗೃತಿವಹಿಸಿ ಕೆಲಸಮಾಡಬೇಕು. ಗ್ರಾಮ ಪಂಚಾಯತ ಮಟ್ಟದಲ್ಲಿ ಅನಕ್ಷರತೆ, ಶಾಲೆಯಿಂದ ಹೊರಗುಳಿಯುವ ಮಕ್ಕಳ ಕುರಿತು ಬಾಲ್ಯವಿವಾಹವನ್ನು ತಡೆ ಮುಂತಾದ ಸಮಾಜಿಕ ಅನಿಷ್ಟ ಕುರಿತು ಗ್ರಾಮಗಳಲ್ಲಿ ಜನರಿಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆಮಾಡಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣಪಂಚಾಯತರಾಜ್ ವ್ಯವಸ್ಥೆಯಲ್ಲಿ ಜನರ ಬಳಿಗೆ ಹೋಗಿ ಅವರ ಸಮಸ್ಯೆಗಳ ಪರಿಹಾರ ಹಾಗೂ ಗ್ರಾಮದ ಜನರ ಸ್ಥಳಿಯ ಬೇಡಿಕೆಗೆ ಅನುಸಾರ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲು ವಿಕೇಂದ್ರೀಕೃತ ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಅಧಿಕಾರಿಗಳು ಮುಂದಾಗಬೇಕು ಎಂದರು.
ಮಾಜಿ ಶಾಸಕ ಡಿ.ಆರ್.ಪಾಟೀಲ. ಜಿ.ಪಂ ಉಪಕಾರ್ಯದಶರ್ಿ ಪ್ರಾಣೇಶ ರಾವ್, ಯೋಜನಾ ನಿದರ್ೇಶಕ ಟಿ. ದಿನೇಶ, ಜಿಲ್ಲಾ, ತಾಲೂಕಾ ಹಾಗೂ ಗ್ರಾ.ಪಂ. ಅಧಿಕಾರಿಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.