ತಮಗೆ ಅಧಿಕಾರ ಬೇಡ ಆದರೂ ಪಕ್ಷದ ತೀರ್ಮಾನಕ್ಕೆ ಬದ್ಧ; ಡಿ.ಕೆ. ಶಿವಕುಮಾರ್

 ಬೆಂಗಳೂರು,ಆ 25      ನನಗೆ ಯಾವುದೇ ಅಧಿಕಾರವೂ ಬೇಡ. ಪಕ್ಷದ ವಿಚಾರವಾಗಿ ಹೈಕಮಾಂಡ್ ಯಾವುದೇ ನಿರ್ಧಾರ ಬೇಕಾದರೂ ತೆಗೆದುಕೊಳ್ಳಲಿ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.    ನಗರದ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪಕ್ಷದ ಪ್ರಮುಖ ಹುದ್ದೆ ವಿಚಾರವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ,ತಮಗೆ ಯಾವುದಕ್ಕೂ ಆತುರ ಇಲ್ಲ ಯಾರಿಗೆ ಅಧಿಕಾರ ಬೇಕು, ಯಾರಿಗೆ ಕಾರು ಬೇಕೋ, ಮನೆ ಬೇಕೋ ತೆಗದುಕೊಳ್ಳಲಿ. ನನಗೆ ಸ್ವಂತ ಮನೆ ಇದೆ ಸಧ್ಯಕ್ಕೆ ಅದು ಸಾಕು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಕೇಳಿಬರುತ್ತಿರುವ ಬಗ್ಗೆ ಕೂಡ ಮಾತನಾಡಿದ, ನನಗೆ ಏನೂ ಗೊತ್ತಿಲ್ಲ. ನಾಳೆ ರಾಜ್ಯಕ್ಕೆ ನಮ್ಮ ಪಕ್ಷದ ನಾಯಕರು ಬರುತ್ತಿದ್ದಾರೆ. ನೋಡೋಣ' ಎಂದು ಅವರು ಹೇಳಿದರು.    ಇನ್ನು ಸಿದ್ದರಾಮಯ್ಯ ಹಾಗೂ ದೇವೇಗೌಡ ,ಕುಮಾರಸ್ವಾಮಿ ನಡುಗೆ ಆರೋಪ ಪ್ರತ್ಯಾರೋಪದ ಬಗ್ಗೆ   ಕೇಳಲಾದ ಪ್ರಶ್ನೆಗೆ ಉತ್ತರಿಸಿದ  ಅವರು, ಸಿದ್ದರಾಮಯ್ಯ, ಕುಮಾರಸ್ವಾಮಿ, ದೇವೇಗೌಡರು ಏನೇನು ಮಾತನಾಡಿದ್ದಾರೆ ತಮಗೆ ಗೊತ್ತಿಲ್ಲ. ಕಳೆದ ಕೆಲವು ದಿನಗಳಿಂದ ನಾನು ಪತ್ರಿಕೆ ನೋಡಿಲ್ಲ. ಹೀಗಾಗಿ ನಾನು ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಒಬ್ಬ ಮುಖ್ಯಮಂತ್ರಿ ಅವರ ಕೈ ಕೆಳಗೆ 14 ತಿಂಗಳು ಮಾಡಿದ್ದ ಕೆಲಸಕ್ಕೆ ಬದ್ಧನಾಗಿದ್ದೇನೆ ಎಂದು ಹೇಳುವ ಮೂಲಕ ಮೈತ್ರಿ ಸರ್ಕಾರದ ಪತನದ ಬಗ್ಗೆ ತಾವು ಚೆರ್ಚಿಸುವುದಿಲ್ಲ ಎಂದು ಹೇಳಿದ್ದಾರೆ.    ಬಿಜೆಪಿ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನಕ್ಕೆ ಡಿ.ಕೆ.ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದರು. 'ಜೇಟ್ಲಿ ಅವರು ಮಾದರಿ ರಾಜಕಾರಣಿ. ನಾನೂ ಎಷ್ಟೋ ಬಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಕರ್ನಾಟಕ ರಾಜಕಾರಣದಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಅವರ ಜೀವನ ಇಷ್ಟು ಬೇಗ ಅಂತ್ಯ ಕಾಣಬಾರದಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದರು.