ಗದಗ 28 : ತಾಲ್ಲೂಕಿನ ಅಡವಿಸೋಮಾಪೂರ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾದ ಶ್ರೀಮತಿ ಪವಿತ್ರಾ ಪ್ರಲ್ಹಾದ ಹೊಸಳ್ಳಿ ಅವರನ್ನು ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷರಾದ ರುದ್ರಣ್ಣ ಗುಳಗುಳಿ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹಾಲುಮತ ಮಹಾಸಭಾದ ಗೌರವಾಧ್ಯಕ್ಷ ನಾಗರಾಜ ಮೆಣಸಗಿ, ಮಾಜಿ ಅಧ್ಯಕ್ಷ ಪ್ರಲ್ಹಾದ ಹೊಸಳ್ಳಿ, ಉಪಾಧ್ಯಕ್ಷರುಗಳಾದ ಸೋಮನಗೌಡ ಪಾಟೀಲ, ರಾಘು ವಗ್ಗನವರ, ಪ್ರಧಾನ ಕಾರ್ಯದರ್ಶಿ ಮುತ್ತು ಜಡಿ, ಸಂಘಟನಾ ಕಾರ್ಯದರ್ಶಿ ಸತೀಶ ಗಿಡ್ಡಹನುಮಣ್ಣವರ, ಉಮೇಶ ಪೂಜಾರ, ರವಿ ಲಕ್ಕಣ್ಣವರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.