ವಿಶ್ವಕರ್ಮ ಜಯಂತಿ: ಜಿಲ್ಲಾಡಳಿತದಿಂದ ಗೌರವ ನಮನ ಸಲ್ಲಿಕೆ

ಕೊಪ್ಪಳ 19: ವಿಶ್ವಕರ್ಮ ಜಯಂತಿ ಆಚರಣೆ ನಿಮಿತ್ತ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪವನ್ನು ಅಪರ್ಿಸಿ ಗೌರವ ನಮನ ಸಲ್ಲಿಸುವುದರ ಮೂಲಕ ಸರಳವಾಗಿ ಆಚರಿಸಲಾಯಿತು.

ನೆರೆಹಾವಳಿ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ ವಿಶ್ವಕರ್ಮ ಜಯಂತಿಯ ಸರಳ ಆಚರಣೆಗೆ ಸಮಾಜದ ಮುಖಂಡರು ಸ್ವಯಂಪ್ರೇರಿತರಾಗಿ ಸಮ್ಮತಿಸಿದ ಕಾರಣ ವಿಶ್ವಕರ್ಮ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಮಂಗಳವಾರದಂದು ಸರಳವಾಗಿ ಆಚರಿಸಲಾಯಿತು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂತರ್ಿ ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಾಬಣ್ಣ, ಜಿಲ್ಲಾಧಿಕಾರಿ ಕಚೇರಿಯ ಜಗದೀಶ, ಮಹಾವೀರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಹಾಗೂ ಸಮಾಜದ ಮುಖಂಡರಾದ ಈಶಪ್ಪ ಬಡಿಗೇರ, ರುದ್ರಪ್ಪ ಮಾಸ್ಟರ್, ರಾಮಣ್ಣ ಬ್ಯಾಲಹಾಳ ಕುಷ್ಟಗಿ, ಎ.ಪ್ರಕಾಶ, ಮಂಜುನಾಥ ಮನ್ನಿಕೊಪ್ಪ, ಶೇಖರಪ್ಪ ಬಡಿಗೇರ, ಕುಬೇರಪ್ಪ ಬಡಿಗೇರ, ಪ್ರಾಣೇಶ ಬಡಿಗೇರ, ಫಕಿರೇಶ ಕಮ್ಮಾರ ಮತ್ತು ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಗೌರವ ನಮನ ಸಲ್ಲಿಸಿದರು.