ಹಾವೇರಿ: ಮೇ 29: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭವಾದ ಹಿನ್ನೆಲೆಯಲ್ಲಿ ಮೇ 27 ಹಾಗೂ 28 ರಂದು ಹಾನಗಲ್ ಮತ್ತು ಶಿಗ್ಗಾಂವಿ ಪಟ್ಟಣಗಳ ವ್ಯಾಪ್ತಿಗೆ ಬರುವ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಕೃಷಿ ಅಧಿಕಾರಿಗಳ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿತು.
ಉಪ ಕೃಷಿ ನಿದರ್ೇಶಕ ಕರಿಯಲ್ಲಪ್ಪ.ಡಿ.ಕೊರಚರ ಅವರು ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಮಾರಾಟ ಮಾಡಬೇಕು ಹಾಗೂ ಕಡ್ಡಾಯವಾಗಿ ರಶೀದಿ ನೀಡಬೇಕು ಎಂದು ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು.
ಕೃತಕ ಅಭಾವ ಸೃಷ್ಠಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು, ಅವಧಿ ಮುಗಿದ ಕೃಷಿ ಪರಿಕರಗಳನ್ನು ಮಾರಾಟ ಮಾಡುವುದು, ಖುಲ್ಲಾ ಬೀಜಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಪರವಾನಿಗೆ ಅಮಾನತ್ತು ಹಾಗೂ ರದ್ದು ಗೊಳಿಸಿ ಕಾನೂನು ಕ್ರಮ ಕೈಗೊಳ್ಳಲಾವುದು ಎಂದು ಎಚ್ಚರಿಸಿದರು.
ಖುಲ್ಲಾ (ಲೂಸ್) ಬಿತ್ತನೆ ಬೀಜಗಳನ್ನು ಬಿತ್ತುವುದರಿಂದ ಇಳುವರಿಯಲ್ಲಿ ತೀವ್ರ ನಷ್ಟವಾಗುತ್ತದೆ. ಕಾರಣ ರೈತ ಬಾಂಧವರು ಖುಲ್ಲಾ ಬೀಜಗಳನ್ನು ಖರೀದಿಸಬಾರದು ಮತ್ತು ಅಂತಹ ಮಾರಾಟಗಾರರು ಕಂಡುಬಂದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಲು ರೈತ ಬಾಂಧವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮಾರಾಟ ಮಳಿಗೆಗಳಲ್ಲಿ ಕಡ್ಡಾಯವಾಗಿ ಕೃಷಿ ಪರಿಕರಗಳ ದಾಸ್ತಾನು ಮತ್ತು ಮಾರಾಟ ದರವನ್ನು ಎದ್ದು ಕಾಣುವಂತೆ ಪ್ರದಶರ್ಿಸಬೇಕು. ದಾಸ್ತಾನು ವಹಿಗಳನ್ನು ನಿಗಧಿತ ನಮೂನೆಗಳ ಪ್ರಕಾರ ನಿರ್ವಹಿಸಬೇಕು ಹಾಗೂ ಅಧಿಕೃತ ಪರವಾನಿಗೆ ಇಲ್ಲದ ಪರಿಕರಗಳನ್ನು ಮಾರಾಟ ಮಾಡಬಾರದು. ಕೃಷಿ ಇಲಾಖೆ ಮಾನದಂಡದಂತೆ ವಹಿವಾಟು ಮಾಡಬೇಕು ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಸಹಾಯಕ ಕೃಷಿ ನಿದರ್ೇಶಕ (ಜಾರಿದಳ-2) ಪ್ರಾಣೇಶ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಮಾರಾಟಗಾರರಿಗೆ ಕಾರಣ ಕೇಳಿ ನೋಟಿಸ್ ನೀಡಿದರು. ಹಾವೇರಿಯ ಸಹಾಯಕ ಕೃಷಿ ನಿದರ್ೇಶಕ ಸುನೀಲ್ ನಾಯ್ಕ್, ಶಿಗ್ಗಾಂವ ಸಹಾಯಕ ಕೃಷಿ ನಿದರ್ೇಶಕ ಸುರೇಶ ದಿಕ್ಷೀತ್ ಹಾಜರಿದ್ದರು.