ಧಾರವಾಡ 02: ವಿಶ್ವ ಪರಿಸರ ದಿನಾಚರಣೆ-2025 ರ ಅಂಗವಾಗಿ ಇಂದು (ಜೂ.2) ರಂದು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಹುಬ್ಬಳ್ಳಿ-ಧಾರವಾಡ ನಾಗರೀಕ ಪರಿಸರ ಸಮಿತಿ, ಎಸ್.ಡಿ.ಎಮ್ ಇಂಜೀನೀಯರಿಂಗ್ ಕಾಲೇಜ್, ಮತ್ತು ಜೆ.ಎಸ್.ಎಸ್ ವಿದ್ಯಾಗಿರಿ ಸಂಸ್ಥೆಯ ಸಹಯೋಗದೊಂದಿಗೆ ಜಿಲ್ಲ್ಲಾ ಮಟ್ಟದ ಪ್ರಾಥಮಿಕ ಶಾಲೆ, ಪ್ರೌಢ ಶಾಲಾ ವಿಧ್ಯಾರ್ಥಿಗಳಿಗೆ ನಿಬಂಧ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಎಂಬ ವಿಷಯದ ಬಗ್ಗೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಜಗದೀಶ ಐ.ಹೆಚ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವ ಪರಿಸರ ದಿನಾಚರಣೆಯ ಮಹತ್ವ ಹಾಗೂ ವಿಶ್ವ ಪರಿಸರ ದಿನಾಚರಣೆಯ ಘೋಷಣೆ ಇವುಗಳ ಮುಖ್ಯ ಉದ್ದೇಶಗಳನ್ನು ತಿಳಿಸಿದರು. ಈ ವರ್ಷದ ವಿಶ್ವ ಪರಿಸರ ದಿನಾಚರಣೆ ಘೋಷಣೆ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಕುರಿತು ಮಾತನಾಡಿ, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೆ ಇರುವುದೇ ಇದಕ್ಕೆ ಇರುವ ಪರಿಹಾರ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್ ದೊಡ್ಡಮನಿ ಅವರು ಮಾತನಾಡಿ, ಪರಿಸರವನ್ನು ರಕ್ಷಿಸುವುದರ ಮೂಲಕ ನಾವು ಸುರಕ್ಷಿತವಾಗಿ ಇರಬಹುದು. ಪರಿಸರದಲ್ಲಿ ಪ್ರತಿಯೊಂದು ಜೀವಿಗಳಿಗೂ ತನ್ನದೇ ಆದ ಬದುಕು ಕಟ್ಟಿಕೊಳ್ಳುವ ಉದ್ದೇಶ ಇರುತ್ತದೆ. ಇವುಗಳು ಪರಿಸರದ ಒಂದು ಕೊಂಡಿ. ಪರಿಸರದಲ್ಲಿರುವ ಪ್ರತಿಯೊಂದು ಪ್ರಾಣಿ, ಪಕ್ಷಿಗಳು ಪರಿಸರಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಪರಿಸರ ಸಂರಕ್ಷಣೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿದರು.ಕ.ರಾ.ಮಾ.ನಿ.ಮಂ ಹಿರಿಯ ಪರಿಸರ ಅಧಿಕಾರಿ ಗೋಪಾಲಕೃಷ್ಣ ಸಣತಂಗಿ, ಅವರು ಮಾತನಾಡಿ, ಪರಿಸರ ಸಂರಕ್ಷಣೆ ತುಂಬಾ ಅಗತ್ಯವಾಗಿದ್ದು, ಅದರಿಂದ ಮಾತ್ರ ಪರಿಸರ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ. ಸೂಕ್ತ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬ ವಿದ್ಯಾರ್ಥಿಯ ಪಾಲ್ಗೋಳ್ಳುವಿಕೆ ಅವಶ್ಯಕತೆ ಇದೆ. ಆದ್ದರಿಂದ ಮಕ್ಕಳಲ್ಲಿ ಪ್ಲಾಸ್ಟಿಕ್ ಮಾಲಿನ್ಯದ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಮುಂಬರುವ ಸೆಪ್ಟಂಬರ್ ತಿಂಗಳಿನಲ್ಲಿ ಮಣ್ಣಿನಿಂದ ಮಾಡಿದ ಮತ್ತು ಬಣ್ಣ ರಹಿತ ಗಣೇಶನ ವಿಗ್ರಹಗಳ ಪೂಜಿಸುವುದಕ್ಕೆ ವಿದ್ಯಾರ್ಥಿಗಳಿಗೆ ತಿಳಿಸಿದರು ಮತ್ತು ಇದರ ಬಗ್ಗೆ ನಿಬಂಧವನ್ನು ಬರೆದು ವಿದ್ಯಾರ್ಥಿಗಳು ವಲಯ ಕಛೇರಿಗೆ ಸಲ್ಲಿಸಿದಲ್ಲಿ, ಸೂಕ್ತ ಬಹುಮಾನವನ್ನು ನೀಡಲಾಗುವುದು ಎಂದು ತಿಳಿಸಿದರು.ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿಯ ಅಧ್ಯಕ್ಷ ಶಂಕರ ಕುಂಬಿ ಅವರು ಮಾತನಾಡಿ, ಜಿಲ್ಲೆಯಾದ್ಯಂತ ಇರುವ ಕಲ್ಯಾಣ ಮಂಟಪಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ತಡೆಗಟ್ಟಬೇಕು ಮತ್ತು ಶಾಲೆಗಳಲ್ಲಿ ಪ್ಲಾಸ್ಟಿಕ್ ನಿಷೇಧಿತ ಪ್ರದೇಶವೆಂದು ಫಲಕವನ್ನು ಪ್ರದರ್ಶಿಸಬೇಕೆಂದು ಹೇಳಿದರು. ಪ್ರತಿಯೊಬ್ಬರು ಒಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ, ಬೆಳೆಸುವ ಜವಾಬ್ದಾರಿ ತಗೆದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಭಾಗಿಯಾಗಲು ತಿಳಿಸಿದರು.
ಕಾರ್ಯದರ್ಶಿಡಾ. ವಿಲಾಸ ಕುಲಕರ್ಣಿ ಅವರು ಸ್ವಾಗತಿಸಿದರು. ಕೆ.ಹೆಚ್. ನಾಯಕ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಣ ಇಲಾಖೆಯ ಅಧಿಕಾರಿ ಡಾ. ರೇಣುಕಾ ಅಮಲಜೇರಿ ಅವರು ವಂದಿಸಿದರು.
ಈ ಸಂದರ್ಭದಲ್ಲಿ ಲಲಿತಾ ದೊಡವಾಡ, ಮಹಾವೀರ ಉಪಾಧ್ಯಾಯ, ಬಿ.ಐ. ಈಳಿಗೇರ ಹಾಗೂ ಜೆ.ಎಸ್.ಎಸ್ ಕಾಲೇಜಿನ ಸಿಬ್ಬಂದಿವರ್ಗದವರು ಮತ್ತು ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಛೇರಿಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಯೋಗ ಸ್ಪರ್ಧೆ; ವಿಜಯ ಅರಳಿಕಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆಧಾರವಾಡ 02: ಸಾರ್ವಜನಿಕ ಶಿಕ್ಷಣ ಇಲಾಖೆಯು ಧಾರವಾಡ ಜಿಲ್ಲಾ ಮಟ್ಟದ ಓಲಂಪಿಯಾಡ್ ಯೋಗ ಸ್ಪರ್ಧೆಯನ್ನು ಧಾರವಾಡದ ಸರಕಾರಿ ಶಿಕ್ಷಕಿಯರ ತರಬೇತಿ ಶಾಲೆಯಲ್ಲಿ ಮೇ 31, 2025 ರಂದು ಏರಿ್ಡಸಲಾಗಿತ್ತು.
ಬಾಲಕರ ಯೋಗ ಸ್ಪರ್ಧೆ ವಿಭಾಗದಲ್ಲಿ ಎನ್.ಎ.ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಕು. ವಿಜಯ ಸಂಗಪ್ಪ ಅರಳಿಕಟ್ಟಿ ಉತ್ತಮ ಪ್ರದರ್ಶನ ನೀಡಿ, ಪ್ರಥಮ ಸ್ಥಾನ ಗಳಿಸಿ, ರಾಜ್ಯಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ಶಾಲೆಯ ಉಸ್ತುವಾರಿ ಸದಸ್ಯರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಗೋಪಾಲ್ ಎಮ್. ಬ್ಯಾಕೋಡ ಅವರು ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.