ವಿಜಯಪುರ 09: ಜಿಲ್ಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆಯ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜೂನ್ 21 ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ 11ನೇ ವಿಶ್ವ ಯೋಗ ದಿನಾಚರಣೆ ಯೋಗ ಸಂಗಮ, ಯೋಗ ಧನುಷ, ಹಸಿರು ಯೋಗ (ಹರಿತ್ ಯೋಗ) ಹಾಗೂ ಯೋಗ ಪಾರ್ಕ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಿಂದಗಿ ತಾಲೂಕಿನ ಕೆರೂಟಗಿಯ ಆಯುಷ್ಮಾನ ಆರೋಗ್ಯ ಮಂದಿರದಲ್ಲಿ ಯೋಗ ತರಬೇತುದಾರರನ್ನೊಳಗೊಂಡ ಯೋಗ ಸಂಗಮ ಕಾರ್ಯಕ್ರಮ ಏರಿ್ಡಸಲಾಗಿದೆ.
ಯಶಸ್ವಿ ಯೋಗ ದಿನಾಚರಣೆ ಕಾರ್ಯಕ್ರಮಕ್ಕಾಗಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತಾ ವ್ಯವಸ್ಥೆ, ಕ್ರೀಡಾಂಗಣದ ಸ್ವಚ್ಛತೆ, ಅಂಬ್ಯೂಲೆನ್ಸ್ ವ್ಯವಸ್ಥೆ, ಯೋಗ ತರಬೇತಿದಾರರ ವ್ಯವಸ್ಥೆ, ಆಯುಷ್ ಪದ್ಧತಿ ತಿಳುವಳಿಕೆಗೆ ಓರ್ವ ವೈದ್ಯರ ನಿಯೋಜನೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ವಾಯ್-ಬ್ರೇಕ್ ಯೋಗ ಆಪ್ ಸಹಾಯದಿಂದ ವಿವಿದ ಬಗೆಯ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆ.ಎಸ್.ಆರ್.ಟಿ.ಸಿ, ಸಿಬ್ಬಂದಿಗಳಿಗೆ, ಖೈದಿಗಳಿಗೆ, ವಾಣಿಜ್ಯ ಮಳಿಗೆ ಸಿಬ್ಬಂದಿಗಳಿಗೆ ಗ್ರಾಮ ಸಭೆ, ನ್ಯಾಯಾಲಯಗಳು, ಸರ್ಕಾರಿ ಕಚೇರಿಗಳು, ಸರ್ಕಾರೇತರ ಸಂಸ್ಥೆಗಳು, ಹಾಗೂ ಇತರ ಸಂಸ್ಥೆಗಳ ಸಿಬ್ಬಂದಿಗಳಿಗೆ 10ರಿಂದ 15 ನಿಮಿಷಗಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹಸಿರು ಯೋಗ( ಹರಿತ್ ಯೋಗ) ಕಾರ್ಯಕ್ರಮಗಳಲ್ಲಿ ಎನ್.ಎಸ್.ಎಸ್, ಸ್ಕೌಟ ಆಂಡ್ ಗೈಡ್ಸ್, ಎನ್.ಸಿ.ಸಿ, ಅರಣ್ಯ ಇಲಾಖೆ, ಸರ್ಕಾರಿ ಕಚೇರಿಗಳು, ಸರ್ಕಾರೇತರ ಕಚೇರಿಗಳು, ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಿರ್ದಿಷ್ಟ ಪಡಿಸಿದ ಸ್ಥಳಗಳಲ್ಲಿ ಯೋಗಭ್ಯಾಸ ನಂತರ ಶ್ರಮಧಾನ, ಸ್ವಚ್ಚತಾ ಅಭಿಯಾನ ಹಾಗೂ ನಿಗಧಿಪಡಿಸಿದ ಸ್ಥಳಗಳಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಸಿ ನಡುವ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಅವರು ಸೂಚಿಸಿದರು.
ಕಾರ್ಯಕ್ರಮದ ದಿನದಂದು ಪೊಲೀಸರ್ ನಿಯೋಜನೆ, ಕ್ರೀಡಾಂಗಣವನ್ನು ಸ್ವಚ್ಚಗೊಳಿಸುವುದು, ಅಂದು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಎನ್.ಎಸ್.ಎಸ್, ಸ್ಕೌಟ ಆಂಡ್ ಗೈಡ್ಸ್, ಎನ್.ಸಿ.ಸಿ, ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಬೇಕು ಕಾರ್ಯಕ್ರಮದ ವೇಳೆ ಒಂದು ವೇಳೆ ಮಳೆ ಬಂದಲ್ಲಿ ಒಳಾಂಗಣ ಕ್ರೀಡಾಂಗಣದಲ್ಲಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಕಾರ್ಯಕ್ರಮದಲ್ಲಿ ಪತಂಜಲಿ ಹಾಗೂ ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ಆಯೋಜಿಸಬೇಕು ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳಿಗಾಗಿ ಸಂಸ್ಥೆಯವರು ನಿಗದಿ ಪಡಿಸಿದ ದಿನಾಂಕದಂದು ಬೆಳಿಗ್ಗೆ 9 ಗಂಟೆಗೆ ಆಯುಷ ಇಲಾಖೆಯ ವತಿಯಿಂದ ಒಬ್ಬ ಯೋಗ ಶಿಕ್ಷಕರನ್ನು ಕಳುಹಿಸಿ 20 ನಿಮಿಷಯ ಯೋಗಭ್ಯಾಸ ಆಯೋಜಿಸುವುದು, ಸ್ಕೌಟ ಆಂಡ್ ಗೈಡ್ಸ್, ಯೋಗ ಶಿಕ್ಷಕ ಹಾಗೂ ಆಯುಷ ಪದ್ಧತಿಯ ತಿಳುವಳಿಕೆಗಾಗಿ ಒಬ್ಬ ವೈದ್ಯರನ್ನು ನಿಯೋಜಿಸಿ 20 ನಿಮಿಷಗಳ ಕಾಲ ಯೋಗ ಆಚರಿಸುವುದು, ಕಾರಾಗೃಹ ಅಧೀಕ್ಷಕರು, ಜಿಲ್ಲಾ ಬಂದಿಖಾನೆಯಲ್ಲಿ ಇಲಾಖೆಯ ವತಿಯಿಂದ ಯೋಗ ಧನುಷ್ ಕಾರ್ಯಕ್ರಮದಲ್ಲಿ ಸಿಬ್ಬಂದಿ, ಖೈದಿಗಳಿಗ ವಾಯ್ ಬ್ರೀಕ್ ಯೋಗ ಆಪ್ ಸಹಾಯದಿಂದ 30 ನಿಮಿಷಗಳ ಯೋಗ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಮಾತನಾಡಿ, ಯೋಗದಿನ ನಿಗದಿತ ಕಾರ್ಯಕ್ರಮಗಳನ್ನು ನಿಗದಿತ ಅವಧಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅಲ್ಪೋಪಹಾರ, ಶುದ್ಧ ಕುಡಿಯುವ ನೀರು, ಅಂಬುಲೆನ್ಸ್, ವ್ಯವಸ್ಥೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಕೆ.ಹೊಸಮನಿ, ಆಯುಷ್ ಇಲಾಖೆಯ ಡಾ.ವಿದ್ಯಾವತಿ ಅಥಣಿ, ಡಾ.ವಿ.ಬಿ.ದೇಸಾಯಿ, ಡಾ.ಬಸವರಾಜ ಒಗದುರ್ಗಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ಮಹಾವಿದ್ಯಾಲಯದ ಬಿ.ಕೆ.ಶೈಲಕಾ, ಡಾ.ರಿಷಿಕೇಶ ಪಾಟೀಲ, ಸೇರಿದಂತೆ ಇಲಾಖೆ ಸಿಬ್ಬಂದಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.